Breaking
1 Apr 2026, Wed

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೃಗಾಲಯ ದಿನಾಚರಣೆ ಕಾರ್ಯಕ್ರಮ

ಮೃಗಾಲಯ ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್ ಪನ್ವಾರ್ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಸೇನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಜ್ಯದಲ್ಲಿ ಬನ್ನೇರುಘಟ್ಟ ಮೃಗಾಲಯ ಮೊದಲನೇ ಸ್ಥಾನದಲ್ಲಿದ್ದು ಪ್ರತಿ ವರ್ಷ ಹೊಸ ಪ್ರಭೇದದ ಪ್ರಾಣಿಗಳನ್ನ ಸೇರ್ಪಡೆ ಮಾಡಲಾಗುತ್ತಿದೆ. ಪ್ರತಿಯೊಬ್ಬರು ವನ್ಯಜೀವಿಗಳನ್ನ ದತ್ತು ಪಡೆಯುವ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಕೈಜೋಡಿಸಬೇಕೆಂದು ಸುನಿಲ್ ಪನ್ವಾ‌ರ್ ಮನವಿ ಮಾಡಿದರು

Leave a Reply