Breaking
25 May 2026, Mon

ವಿಧಾನಸೌಧದ ಮುಂಭಾಗ ಮಾದಕ ವಸ್ತು ಮುಕ್ತ ಕರ್ನಾಟಕಕ್ಕಾಗಿ ಆಯೋಜಿಸಿದ್ದ ಮ್ಯಾರಥಾನ್ ಓಟಕ್ಕೆ ಗೃಹ ಸಚಿವ ಪರಮೇಶ್ವರ್ ಚಾಲನೆ

ಬೆಂಗಳೂರಿನ ವಿಧಾನಸೌಧದ ಮುಂಭಾಗ ಡ್ರಗ್ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಬೃಹತ್ ಮ್ಯಾರಥಾನ್ ಆಯೋಜನೆ ಮಾಡಲಾಗಿತ್ತು. ಗೃಹ ಸಚಿವ ಪರಮೇಶ್ವರ ಹಾಗೂ ಬೆಂಗಳೂರು ಪೊಲೀಸ್ ಕಮಿಷನ‌ರ್ ದಯಾನಂದ್‌ ಮ್ಯಾರಥಾನ್ ಗೆ ಚಾಲನೆ ನೀಡಿದರು. ಸಾವಿರಾರು ಸಾರ್ವಜನಿಕರು ಮ್ಯಾರಥಾನ್ ನಲ್ಲಿ ಭಾಗವಹಿಸಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಜೊತೆಗೆ ಸೈಬ‌ರ್ ಅಪರಾಧ ತಡೆಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಗ್ರಹ ಸಚಿವರು ಇದೆ ವೇಳೆ ಮನವಿ ಮಾಡಿದರು.

Leave a Reply