ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾವೇರಿಪುರಂನಲ್ಲಿ ನೂತನ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು ಉದ್ಘಾಟನೆ ಮಾಡಲಾಯಿತು. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ನೂತನ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಿದರು. ಹಲವು ವರ್ಷಗಳಿಂದ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು ಮಾಡಿಕೊಡುವಂತೆ ಶಾಸಕರಿಗೆ ಮನವಿಯನ್ನ ಸಲ್ಲಿಸಿದ್ದರು. ಹೀಗಾಗಿ ಶಾಸಕರ ಸಮ್ಮುಖದಲ್ಲಿ ನೂತನವಾಗಿ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಿದರು

