Breaking
16 Jul 2026, Thu

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಮುನಿರತ್ನ ವಾಗ್ದಾಳಿ

ನನ್ನ ವಿರುದ್ಧ ಉದ್ದೇಶಪೂರ್ವಕವಾಗಿ ರೇಪ್‌ ಕೇಸ್‌ ಹಾಕಿಸಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಕಮಿಷನ‌ರ್ ದಯಾನಂದ್‌ ಜೊತೆ ಮಾತುಕತೆ ನಡೆಸಿ ನನ್ನ ವಿರುದ್ಧ ರೇಪ್ ಕೇಸ್ ದಾಖಲು ಮಾಡಲಾಗಿದೆ. ಇದರ ಹಿಂದೆ ಕೆಲವು ಪೊಲೀಸ್ ಅಧಿಕಾರಿಗಳು ಕೈಜೊಡಿಸಿದ್ದಾರೆ. ಕಗಲೀಪುರ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಿಸಿ ರಾಜಿನಾಮೆ ನೀಡುವಂತೆ ಕಿರುಕುಳ ನೀಡಲಾಗಿತ್ತು.

ಆದರೆ ಸತ್ಯಕ್ಕೆ ಯಾವಾಗಲೂ ಜಯ ಸಿಗಲಿದೆ ಎಂದು ಅವರು ಡಿಕೆಶಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ

Leave a Reply