ಆನೇಕಲ್ ತಾಲೂಕಿನ ವಿ.ಕಲ್ಲಹಳ್ಳಿ ಗ್ರಾಮದಲ್ಲಿ ಶ್ರೀ ಮುನೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.
ಅಲಂಕೃತ ರಥದಲ್ಲಿ ದೇವರ ಉತ್ಸವ ಮೂರ್ತಿಯನ್ನ ಕೂರಿಸಿ ಊರಿನ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.
ರಥಕ್ಕೆ ಬಾಳೆಹಣ್ಣು ಸಮರ್ಪಿಸಿ ತಮ್ಮ ಕೋರಿಕೆಗಳನ್ನ ಈಡೇರಿಸುವಂತೆ ಭಕ್ತಾದಿಗಳು ಪ್ರಾರ್ಥಿಸಿದರು. ಮಹಿಳೆಯರು ದೀಪದ ಆರತಿಯನ್ನು ಬೆಳಗಿ ಇಷ್ಟಾರ್ಥ ಸಿದ್ಧಿಗಾಗಿ ದೇವರನ್ನು ಪ್ರಾರ್ಥಿಸಿದರು.
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

