ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಲಮ್ಮ ಕೆರೆಯಲ್ಲಿ ಅಕ್ರಮವಾಗಿ ಖಾಸಗಿ ವ್ಯಕ್ತಿಗಳು ರಸ್ತೆ ನಿರ್ಮಾಣ ಮಾಡಿಕೊಂಡಿದ್ದಾರೆ.
ಕೆರೆಯನ್ನ ಮುಚ್ಚಿ ರಸ್ತೆ ನಿರ್ಮಾಣ ಮಾಡಿ ಕೊಂಡಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಯಮಬಾಹಿರವಾಗಿ ಕೆರೆಯನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡಿರುವುದು ಕಂಡುಬಂದಿದೆ.
ಹೀಗಾಗಿ ಗ್ರಾಮಸ್ಥರು ರಸ್ತೆ ತೆರವು ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

