Breaking
21 May 2026, Thu

ಆನೇಕಲ್‌ ಪಟ್ಟಣದಲ್ಲಿ ಅದ್ದೂರಿಯಾಗಿ ನೆರವೇರಿದ ಶ್ರೀ ತಿಮ್ಮರಾಯಸ್ವಾಮಿ ಬ್ರಹ್ಮರಥೋತ್ಸವ

ಆನೇಕಲ್ ಪಟ್ಟಣದ ಆದಿ ದೈವ ಶ್ರೀ ತಿಮ್ಮರಾಯಸ್ವಾಮಿ ಬ್ರಹ್ಮ ರಥೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ದೇವರ ಅಲಂಕೃತ ಮೂರ್ತಿಯನ್ನು ರಥದಲ್ಲಿ ಕೂರಿಸಿ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಮಾಡಲಾಯಿತು.

ಗೋವಿಂದ ಗೋವಿಂದ ನಾಮಸ್ಮರಣೆಯೊಂದಿಗೆ ಸಾವಿರಾರು ಭಕ್ತಾದಿಗಳು ರಥವನ್ನು ಎಳೆದು ತಮ್ಮ ಕೋರಿಕೆಗಳನ್ನ ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು.

ರಥೋತ್ಸವ ಅಂಗವಾಗಿ ದೇವರ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ ಸೇರಿದಂತೆ ಅನ್ನ ದಾಸೋಹ ಕಾರ್ಯಕ್ರಮ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply