ಆನೇಕಲ್ ತಾಲೂಕಿನ ಸರ್ಜಾಪುರ ಬೆಂಗಳೂರು ಮುಖ್ಯ ರಸ್ತೆಯಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ನಲ್ಲಿ ಇಂದು ಮುಂಜಾನೆ ಕಳ್ಳತನವಾಗಿದೆ. ಬುಕ್ ನಲ್ಲಿರುವ ಆಫೀಸ್ ರೂಮ್ ಗೆ ನುಗ್ಗಿದ ಕಳ್ಳನೊಬ್ಬ ಅಲ್ಲಿದ್ದ 25 ಸಾವಿರ ನಗದು ದೋಚಿ ಪರಾರಿಯಾಗಿದ್ದಾನೆ. ಕಳ್ಳನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..