Breaking
3 Jun 2025, Tue

ಆನೇಕಲ್ ನಲ್ಲಿ ಕರಗ ಮಹೋತ್ಸವ ಕುರಿತಂತೆ ಅರ್ಚಕ ರಮೇಶ್‌ ರವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಆನೇಕಲ್‌ ಪಟ್ಟಣದ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಕರಗ ಮಹೋತ್ಸವ ಕುರಿತಂತೆ ಅರ್ಚಕರ ರಮೇಶ್ ರವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗಿತ್ತು.

ಆನೇಕಲ್ ಕರಗ ಆಚರಣೆಗೆ ಎರಡು ಗುಂಪುಗಳ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಲಾಗಿತ್ತು.

ಇಂದು ಹೈಕೋರ್ಟ್ ನಲ್ಲಿ ಅರ್ಚಕ ರಮೇಶ್ ಕುಟುಂಬದವರು ಕರಗ ಹೊರುವಂತೆ ಆದೇಶವಾದ ಹಿನ್ನೆಲೆಯಲ್ಲಿ ಈ ಬಾರಿ ಅರ್ಜುನಪ್ಪರವರ ಮಗ ರಮೇಶ್ ರವರು ಕರಗ ಹೊರಲಿದ್ದಾರೆ ಎಂದು ಮಾಹಿತಿ ನೀಡಲಾಯಿತು. ಜೊತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಎಂದಿನಂತೆ ನಡೆಯಲಿದೆ ಎಂದರು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply