ಆನೇಕಲ್ ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಆನೇಕಲ್ ತಹಶಿಲ್ಪಾರ್ ಶಶಿಧರ್ ಮಾಡ್ಯಾಳ್ ನೇತೃತ್ವದಲ್ಲಿ ಕಿಸಾನ್ ಸಂಘದ ಸದಸ್ಯರ ಸಭೆ ನಡೆಸಲಾಯಿತು.
ಭಾರತೀಯ ಕಿಸಾನ್ ಸಂಘದ ತಾಲೂಕು ಮಟ್ಟದ ಪದಾಧಿಕಾರಿಗಳು ಹಾಗೂ ರೈತರು ಸಭೆಯಲ್ಲಿ ಭಾಗವಹಿಸಿದ್ದರು.
ತಾಲೂಕಿನಲ್ಲಿ ಇತ್ತೀಚೆಗೆ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸರ್ವೆ ಇಲಾಖೆ ಅಧಿಕಾರಿಗಳ ನಿರ್ಲಕ್ಷದ ವಿರುದ್ಧ ರೈತರು ಆಕ್ರೋಶ ಹೊರಹಾಕಿದರು.
ಸಾಧ್ಯವಾದಷ್ಟು ಬೇಗ ರೈತರ ಸಂಕಷ್ಟಗಳಿಗೆ ಪರಿಹಾರ ದೊರಕಿಸಿ ಕೊಡುವುದಾಗಿ ತಹಶಿಲ್ದಾರ್ ಭರವಸೆ ನೀಡಿದರು
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

