Breaking
21 Jul 2026, Tue

ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿ ಅಪಘಾತ

ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿ ಅಪಘಾತ ಸಂಭವಿಸಿದೆ.

ನಿಯಂತ್ರಣ ಕಳೆದುಕೊಂಡು ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.

ಗಾಯವಾಗಿದ್ದ ಬೈಕ್ ಸವಾರನನ್ನ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆನೇಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply