Breaking
4 Jun 2025, Wed

ಫೇಸ್‌ಬುಕ್‌ ವಿಡಿಯೋ ಮಾಡಿ ಬಿಜೆಪಿ ಕಾರ್ಯಕರ್ತನೊಬ್ಬ ನೇಣು ಬಿಗಿಸಿಕೊಂಡು ಆತ್ಮಹತ್ಯೆ

ಫೇಸ್‌ಬುಕ್ ವಿಡಿಯೋ ಮಾಡಿ ಬಿಜೆಪಿ ಕಾರ್ಯಕರ್ತನೊಬ್ಬ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನೇಕಲ್ ಪಟ್ಟಣದ ಕೃಷಿ ಇಲಾಖೆ ಪಕ್ಕದಲ್ಲಿರುವ ಮರದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಎಂಬಾತನ ಮೃತ ದೇಹದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಫೇಸ್ಬುಕ್ ವಿಡಿಯೋದಲ್ಲಿ ತಾನು ಒಬ್ಬರಿಗೆ ಸಾಲ ನೀಡಿದ್ದು ಸಾಲ ವಾಪಸ್ಸು ಕೇಳಿದ ಹಿನ್ನೆಲೆಯಲ್ಲಿ ಕೆಲವರು ಪ್ರವೀಣ್ ಗೌಡ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಆನೇಕಲ್ ಪುರಸಭೆಯ ಸದಸ್ಯರಾದ ಭಾಗ್ಯ ಶ್ರೀನಿವಾಸ್ ಬಾಬು, ಸಮಂದೂರು ಗ್ರಾಮದ ಕಿರಣ್ ಗೌಡ, ದೊಡ್ಡ ಹಾಗಡೆ ಮಧು ಗೌಡ, ಆನೇಕಲ್ ಬಿಜೆಪಿ ಮಂಡಲ ಅಧ್ಯಕ್ಷರಾದ ಮುನಿರಾಜು ಗೌಡ, ಭಾಸ್ಕರ್, ಹರೀಶ್, ಸರವಣ ಸೇರಿದಂತೆ ಹಲವರು ಹಣಕಾಸಿನ ವಿಚಾರವಾಗಿ ಹಲ್ಲೆ ಮಾಡಿರುವುದಾಗಿ ವಿಡಿಯೋದಲ್ಲಿ ಪ್ರವೀಣ್ ಗೌಡ ಹೇಳಿಕೊಂಡಿದ್ದಾನೆ.

ಪ್ರವೀಣ್ ತಂದೆ ಸಹ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರವೀಣ್ ತನ್ನ ತಾಯಿ ಹಾಗೂ ತಂಗಿಯ ಜೊತೆ ಆನೇಕಲ್ ಪಟ್ಟಣದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ.

ಇನ್ನು ಪ್ರವೀಣ್ ತನ್ನ ಸಾವಿಗೆ ನಾಲ್ವರು ಪ್ರಮುಖ ಕಾರಣ ಎಂದು ಹೇಳಿ ವಿಡಿಯೋ ಮಾಡಿ ತನ್ನ ಫೇಸ್ಬುಕ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಿದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸದ್ಯ 8 ಜನರ ವಿರುದ್ಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳು ನಾಪತ್ತೆಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply