ಆನೇಕಲ್ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ತಳಿಯ ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ.
ಹೀಗಾಗಿ ಬಳ್ಳೂರು ಗ್ರಾಮ ಪಂಚಾಯಿತಿ ಮುಂಭಾಗ ದಲಿತ ಸಂಘಟನೆಗಳ ಮುಖಂಡರು ಇಂದು ಪ್ರತಿಭಟನೆ ನಡೆಸಿದರು.
ಜನತಾ ಕಾಲೋನಿಯಲೊರುವ 8 ಅಡಿ ಎತ್ತರದ ಪ್ರತಿಮೆಯನ್ನ ಕಿಡಿಗೇಡಿಗಳು ಕಲ್ಲಿನಿಂದ ಹೊಡೆದು ಮೂರ್ತಿಯನ್ನ ವಿರೂಪ ಗೊಳಿಸಿದ್ದಾರೆ.
ಹೀಗಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ವಿರುದ್ಧ ದಲಿತ ಮುಖಂಡರು ಕಿಡಿಕಾರಿದರು. ಕೂಡಲೇ ಕೃತ್ಯ ಎಸಗಿರುವ ಹಿಡಿಗೇಡಿಗಳನ್ನು ಬಂಧಿಸಬೇಕು ಎಂದು ಮುಖಂಡರು ತಿಳಿಸಿದರು.
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..