Breaking
4 Jun 2025, Wed

ಬಳಗಾರನಹಳ್ಳಿಯ ನೇರಳೂರು ಪಂಚಾಯಿತಿಯಿಂದ ಗ್ರಾಮ ಸಭೆ ಆಯೋಜನೆ

ಬಳಗಾರನಹಳ್ಳಿಯ ನೆರಳೂರು ಪಂಚಾಯಿತಿಯು ಗ್ರಾಮಸಭೆ ಆಯೋಜನೆ ಮಾಡಲಾಗಿತ್ತು. ಗ್ರಾಮ ಸಭೆಗೆ ಅಧಿಕಾರಿಗಳು ಗೈರಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಗ್ರಾಮ ಸಭೆ ನಡೆಸಿದಂತೆ ಪಂಚಾಯಿತಿ ಸದಸ್ಯರನ್ನ ತರಾಟೆಗೆ ತೆಗೆದುಕೊಂಡರು.

ತಹಶೀಲ್ದಾ‌ರ್, ಇಓ, ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಗ್ರಾಮ ಸಭೆಗೆ ಹಾಜರಾಗಿರಲಿಲ್ಲ.

ಹೀಗಾಗಿ ಕಾಟಾಚಾರಕ್ಕೆ ಗ್ರಾಮಸಭೆ ನಡೆಸದಂತೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸದಸ್ಯರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ಉಂಟಾಗಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply