ಬೆಂಗಳೂರಿನ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಕೊಠಡಿಗಳ ನಿರ್ಮಾಣಕ್ಕೆ ಇಂದು ಚಾಲನೆ ನೀಡಲಾಗಿದೆ.
ಶಾಸಕರಾದ ಕೃಷ್ಣಪ್ಪ ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಹಲವು ವರ್ಷಗಳಿಂದ ಕಾಲೇಜು ಆವರಣದಲ್ಲಿ ಹೆಚ್ಚುವರಿ ಕೊಠಡಿಗಳನ್ನ ನಿರ್ಮಾಣ ಮಾಡಿಕೊಡುವಂತೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು.
ಹೀಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೂತನವಾಗಿ ಕೊಠಡಿಗಳನ್ನ ನಿರ್ಮಿಸುವ ಕಾಮಗಾರಿಗೆ ಇಂದು ಶಾಸಕರು ಚಾಲನೆ ನೀಡಿದ್ದಾರೆ
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..