Breaking
4 Jun 2025, Wed

ಸಿಎಂ ಸಿದ್ದರಾಮಯ್ಯ ರವರಿಂದ ಪೌರಕಾರ್ಮಿಕರಿಗೆ ಸೇವಾ ಖಾಯಂ ಪತ್ರ ವಿತರಣೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 12,692 ಪೌರಕಾರ್ಮಿಕರಿಗೆ ಸೇವಾ ಖಾಯಂ ಪತ್ರ ವಿತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ , ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪ್ ಸಿಂಗ್ ಸರ್ಜೆವಾಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕೃಷಿಕ, ಕಾರ್ಮಿಕ, ಶಿಕ್ಷಕ, ಸೈನಿಕ ಈ ದೇಶದ ಅಭಿವೃದ್ಧಿಯ ಆಧಾರಸ್ತಂಭಗಳು. ಪೌರ ಕಾರ್ಮಿಕರನ್ನು ಸ್ವಚ್ಛತಾ ರಾಯಭಾರಿಗಳಂತೆ ನಮ್ಮ ಸರ್ಕಾರ ಭಾವಿಸುತ್ತದೆ. ಪರಿಸರ ಯೋಧರಂತೆ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಬೆಂಗಳೂರು ನಗರವನ್ನು ಸುಂದರವಾಗಿಸಿದ್ದಾರೆ. ಚುನಾವಣೆ ಪೂರ್ವದಲ್ಲಿ ನಿಮ್ಮ ಬದುಕಿಗೆ ಹೊಸ ರೂಪವನ್ನು ನೀಡುತ್ತೇವೆ ಎಂದು ಪೌರಕಾರ್ಮಿಕರಿಗೆ ಮಾತು ಕೊಟ್ಟಿದ್ದೆವು. ಕೊಟ್ಟ ಮಾತಿನಂತೆ 12 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರ ಕೆಲಸ ಖಾಯಂಗೊಳಿಸಿ, ಖಾಯಂಮಾತಿ ಪತ್ರ ನೀಡುವ ಮೂಲಕ ಶ್ರಮಿಕರ ಬದುಕಿನಲ್ಲಿ ಬದಲಾವಣೆ ತಂದಿದ್ದೇವೆ ಎಂದರು.

ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು ಎಂಬುವುದು ನಮ್ಮ ಸರ್ಕಾರದ ಆಶಯ. ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಬಿಬಿಎಂಪಿ ಬಜೆಟ್‌ನಲ್ಲಿ 730 ಕೋಟಿ ರೂ. ಮೀಸಲಿಡಲಾಗಿದೆ. ಯಾರಿಗೂ ಒಂದು ರೂಪಾಯಿ ಲಂಚ ನೀಡದೇ ಪೌರಕಾರ್ಮಿಕರು ನೇಮಕಾತಿ ಆದೇಶ ಪತ್ರ ಪಡೆಯಬೇಕು. ನಿಮ್ಮೆಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ನಾನು, ನಮ್ಮ ಸರ್ಕಾರ ನಿರಂತರವಾಗಿ ಮಾಡಲಿದ್ದೇವೆ. ಪೌರ ಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತರುವುದು ನಮ್ಮ ಸಂಕಲ್ಪ ಮತ್ತು ಬದ್ಧತೆ ಎಂದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply