ಹೆಬ್ಬಗೋಡಿಯಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ನೂತನ ಇಂದಿರಾ ಕ್ಯಾಂಟಿನ್ ಇಂದು ಲೋಕಾರ್ಪಣೆ ಮಾಡಲಾಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಶಾಸಕ ಬಿ. ಶಿವಣ್ಣ ರವರ ನೇತೃತ್ವದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಮಾಡಲಾಯಿತು.

ಈ ಕುರಿತು ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೆಬ್ಬಗೋಡಿ ಸುತ್ತಮುತ್ತ ಸಾವಿರಾರು ಮಂದಿ‌ ಕಾರ್ಮಿಕರು ವಾಸ ಮಾಡುತ್ತಿದ್ದಾರೆ‌. ಕಡಿಮೆ ದರದಲ್ಲಿ ಕಾರ್ಮಿಕರಿಗೆ ಗುಣಮಟ್ಟದ ಆಹಾರ ನೀಡುವ ಉದ್ದೇಶದಿಂದ ಈ ಭಾಗದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಲಾಗಿದೆ. ಮುಂದೆ ಇಂದಿರಾ ಕ್ಯಾಂಟಿನ್ ನಲ್ಲಿ ಸಾವಿರಾರು ಜನ ಕಾರ್ಮಿಕರು ತಮ್ಮ ಹೊಟ್ಟೆ ತುಂಬಿಸುವ ಕೆಲಸ ಮಾಡಲಿದೆ ಎಂದರು.

ಬಳಿಕ ಮಾತನಾಡಿದ ಶಾಸಕ ಶಿವಣ್ಣ ಆನೇಕಲ್ ಟೌನ್, ಅತ್ತಿಬೆಲೆ , ಬೊಮ್ಮಸಂದ್ರ ಹಾಗೂ ಹೆಬ್ಬಗೋಡಿಯಲ್ಲಿ ಬಡವರ ಅನುಕೂಲಕ್ಕಾಗಿ ಸರ್ಕಾರದಿಂದ ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಲಾಗಿದೆ‌. ಪ್ರತಿ ದಿನ ಕೆವಲ 25 ರೂ ಗಳಿಗೆ ಸಾವಿರಾರು ಮಂದಿ ಮೂರು ಹೊತ್ತಿನ ಊಟವನ್ನ ಇಂದಿರಾ ಕ್ಯಾಂಟಿನ್ ನಲ್ಲಿ ಸವಿಯುತ್ತಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಇಂದಿರಾ ಕ್ಯಾಂಟಿನ್ ಗೆ ಪ್ರತಿದಿನ ಬೇಟಿ ನೀಡಿ ಆಹಾರದ ಗುಣಮಟ್ಟವನ್ನ ಪರೀಕ್ಷೆ ಮಾಡುವ ಕೆಲಸ ಮಾಡಬೇಕು ಎಂದು ಶಾಸಕ ಶಿವಣ್ಣ ತಿಳಿಸಿದರು.

ಕಾರ್ಯಕ್ರಮದಲ್ಲಿ ಹೆಬ್ಬಗೋಡಿ ನಗರಸಭೆ ಅಧ್ಯಕ್ಷರಾದ ಪ್ರಮೀಳಾ ರಾಮಚಂದ್ರ ಉಪಾಧ್ಯಕ್ಷರಾದ ಸುಜಾತ ಕೆಪಿ ರಾಜು ನಗರಸಭೆಯ ಆಯುಕ್ತ ನರಸಿಂಹಮೂರ್ತಿ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು‌

Leave a Reply