ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಆದಷ್ಟು ಬೇಗ ಮಾಡಬೇಕೆಂದು ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆಯನ್ನು ನಡೆಸಿದರು ಬೆಂಗಳೂರಿನ ಬಿಬಿಎಂಪಿ ಕಚೇರಿ ಮುಂಭಾಗ ವಾಟಾಳ್ ನಾಗರಾಜ್ ಸೇರಿದಂತೆ ಹಲವು ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ಕಳೆದ ವರ್ಷದಿಂದ ಬಿಬಿಎಂಪಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ. ಜನಪ್ರತಿನಿಧಿ ಇಲ್ಲದೆ ಸಾರ್ವಜನಿಕರಿಗೆ ತೀವ್ರ ಅನಾನುಕೂಲ ಉಂಟಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಧ್ಯವಾದಷ್ಟು ಬಿಬಿಎಂಪಿ ಚುನಾವಣೆಯನ್ನು ಘೋಷಣೆ ಮಾಡಬೇಕೆಂದು ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ವಾಟಾಳ್ ನಾಗರಾಜ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.