ಬೆಂಗಳೂರಿಂದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶ್ರೀನಿವಾಸ ನಗರಕ್ಕೆ ದಿಡೀರ್ ಬೇಟಿ ಕೊಟ್ಟ ಶಾಸಕ ಪ್ರಿಯಕೃಷ್ಣ, ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕರು ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶ್ರೀನಿವಾಸನಗರಕ್ಕೆ ಶಾಸಕ ಪ್ರಿಯಕೃಷ್ಣ ದಿಡೀರ್ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಇತ್ತಿಚೆಗೆ ಶ್ರೀನಿವಾಸನಗರದಲ್ಲಿ ರಸ್ತೆ, ಒಳಚರಂಡಿ ಸಮಸ್ಯೆ ಹಾಗೂ ಕುಡಿಯುವ ನೀರು ಸೇರಿದಂತೆ ಕೆಲವು ಸಮಸ್ಯೆಗಳು ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ ಶಾಸಕ ಪ್ರಿಯಕೃಷ್ಣ ತ್ವರಿತ ಗತಿಯಲ್ಲಿ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದರು