ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪಂತರಪಾಳ್ಯದಲ್ಲಿ ಸರ್ಕಾರಿ ಶಾಲೆಯ ನೂತನ ಕಟ್ಟಡವನ್ನು ಇಂದು ಉದ್ಘಾಟನೆ ಮಾಡಲಾಯಿತು. ಶಾಸಕ ಪ್ರಿಯ ಕೃಷ್ಣ ಹಾಗೂ ಸ್ಥಳೀಯ ಮುಖಂಡರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲೆಯ ಹಳೆ ಕಟ್ಟಡ ಶಿಥಿಲವಾಗಿದ್ದ ಹಿನ್ನೆಲೆಯಲ್ಲಿ ನೂತನವಾಗಿ ಶಾಲಾ ಕಟ್ಟಡ ನಿರ್ಮಿಸಿ ಇಂದು ಶಾಸಕರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡಲಾಯಿತು.