Breaking
21 Jul 2026, Tue

ಪಟ್ಟಣದಲ್ಲಿ ಪ್ರಾಥಮಿಕ ಸಹಕಾರಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಮುನಿರಾಜು ಗೌಡ ಅವಿರೋಧ ಆಯ್ಕೆ

ಆನೇಕಲ್ ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಮುನಿರಾಜು ಗೌಡ ಹಾಗೂ ಉಪಾಧ್ಯಕ್ಷರಾಗಿ ಹೊಂಪಲಘಟ್ಟ ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸಂಘದ ನಿರ್ದೇಶಕರು ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನ ಆಯ್ಕೆ ಮಾಡಿದರು. ಮಾಜಿ ಕೇಂದ್ರ ಸಚಿವ ನಾರಾಯಣಸ್ವಾಮಿ ಸೇರಿದಂತೆ ಗಣ್ಯರು ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಬ್ಯಾಂಕನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದಾಗಿ ಮುನಿರಾಜು ಗೌಡ ಭರವಸೆ ನೀಡಿದರು

Leave a Reply