ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿ ಉಪನಗರದಲ್ಲಿರುವ ಹೊಯ್ಸಳ ಸರ್ಕಲ್ ನಲ್ಲಿ ಒಳಚರಂಡಿ ವ್ಯವಸ್ಥೆಯ ಪೈಪ್ ಲೈನ್ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಶಾಸಕ ಸೋಮಶೇಖರ್ ಹಾಗೂ ಸ್ಥಳೀಯರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇಲ್ಲಿನ ಕಾಳಿಕಾಂಬ ದೇವಾಲಯದ ಸಮೀಪ ಒಳಚರಂಡಿ ಸಮಸ್ಯೆಯಿಂದ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಪೈಪ್ ಲೈನ್ ಕಾಮಗಾರಿಗೆ ಇಂದು ಶಾಸಕರು ಚಾಲನೆ ನೀಡಿದ್ದಾರೆ.
ಕೆಂಗೇರಿ ಉಪನಗರದ ಹೊಯ್ಸಳ ಸರ್ಕಲ್ ನಲ್ಲಿ ಒಳಚರಂಡಿ ವ್ಯವಸ್ಥೆಯ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸೋಮಶೇಖರ್
