Breaking
21 Jul 2026, Tue

ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಅನಾವರಣ

ಬೆಂಗಳೂರಿನ ವಿಧಾನಸೌಧದ ಮುಂಭಾಗ ತಾಯಿ ಭುವನೇಶ್ವರಿ ಪ್ರತಿಮೆ ಅನಾವರಣ ಕಾರ್ಯಕ್ರಮ ಆಯೋಜಿಸಲಾಗಿತ್ತು , ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕನ್ನಡ ಹೋರಾಟಗಾರರ ಮೇಲೆ ಹಾಕಿರುವ ಕೇಸ್ ಗಳನ್ನು ಆದಷ್ಟು ಬೇಗ ಹಿಂಪಡೆಯುವಂತೆ ಹೋರಾಟಗಾರರು ಒತ್ತಾಯ ಮಾಡಿದ್ದಾರೆ, ಇದು ಸಚಿವ ಸಂಪುಟದಲ್ಲಿ ಅನುಮೋದನೆಯಾಗಬೇಕು. ಹೀಗಾಗಿ ಹೋರಾಟಗಾರರು ಅರ್ಜಿ ನೀಡಿದರೆ ಇವುಗಳನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಹೋರಾಟಗಾರರ ಮೇಲಿನ ಕೇಸ್ ಗಳನ್ನು ಹಿಂಪಡೆಯುವುದಾಗಿ ತಿಳಿಸಿದರು

Leave a Reply