Breaking
10 Feb 2026, Tue

ಕುಂಭಮೇಳ ಮುಗಿಸಿ ಬರುವಾಗ ಭೀಕರ ರಸ್ತೆ ಅಪಘಾತ, ಮೈಸೂರಿನ ಇಬ್ಬರು ಭಕ್ತರು ಮೃತಪಟ್ಟಿದ್ದಾರೆ

ಮಹಾ ಕುಂಭಮೇಳ ಮುಗಿಸಿ ಕಾಶಿಯಾತ್ರೆಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿ ಕರ್ನಾಟಕದ ಮೈಸೂರಿನ ಇಬ್ಬರು ವ್ಯಕ್ತಿಗಳು ಹಸುನೀಗಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ಬಳಿ ಈ ಘಟನೆ ನಡೆದಿದೆ. ಇಬ್ಬರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಬೆಳಗ್ಗೆ 8.32ರ ಸಮಯಕ್ಕೆ ರಾಮಕೃಷ್ಣ, ಇಂದು ಬೆಳಗ್ಗೆ 3 ಗಂಟೆಗೆ ಅರುಣ್ ಕೊನೆಯುಸಿರೆಳೆದಿದ್ದಾರೆ. ರಾಮಕೃಷ್ಣ, ಕೆ.ಆರ್.ಎಸ್ ಹಿನ್ನೀರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿದ್ದರು. ಅರುಣ್ ಶಾಸ್ತ್ರಿ ಪುರೋಹಿತರಾಗಿ ಕೆಲಸ ಮಾಡುತ್ತಿದ್ದರು. ಈ ಇಬ್ಬರಿಗೂ ಮದುವೆ ಆಗಿರಲಿಲ್ಲ.

Leave a Reply