Breaking
21 Jul 2026, Tue

ಪಣತ್ತೂರು ಎಸ್.ಕ್ರಾಸ್ ಬಳಿ ರಸ್ತೆ ಅಗಲೀಕರಣ, ಬಿಬಿಎಂಪಿಯಿಂದ ಮನೆಗಳ ತೆರವು ಕಾರ್ಯ

ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರು ಎಸ್ ಕ್ರಾಸ್ ಬಳಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಮನೆಗಳ ತೆರವು ಕಾರ್ಯಾಚರಣೆ ನಡೆಸಲಾಯಿತು. ಬಿಬಿಎಂಪಿ ವತಿಯಿಂದ ರಸ್ತೆ ಪಕ್ಕದಲ್ಲಿದ್ದ ಆರು ಮನೆಗಳನ್ನು ಇಂದು ಕೆಲಸ ಮಾಡಲಾಯಿತು. ಈ ರಸ್ತೆ ಕಿರಿದಾಗಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ರಸ್ತೆ ಪಕ್ಕದ ಮನೆಗಳ ತೆರವು ಕಾರ್ಯಚರಣೆ ನಡೆಸಲಾಗುತ್ತದೆ.

Leave a Reply