ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರು ಎಸ್ ಕ್ರಾಸ್ ಬಳಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಮನೆಗಳ ತೆರವು ಕಾರ್ಯಾಚರಣೆ ನಡೆಸಲಾಯಿತು. ಬಿಬಿಎಂಪಿ ವತಿಯಿಂದ ರಸ್ತೆ ಪಕ್ಕದಲ್ಲಿದ್ದ ಆರು ಮನೆಗಳನ್ನು ಇಂದು ಕೆಲಸ ಮಾಡಲಾಯಿತು. ಈ ರಸ್ತೆ ಕಿರಿದಾಗಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ರಸ್ತೆ ಪಕ್ಕದ ಮನೆಗಳ ತೆರವು ಕಾರ್ಯಚರಣೆ ನಡೆಸಲಾಗುತ್ತದೆ.
ಪಣತ್ತೂರು ಎಸ್.ಕ್ರಾಸ್ ಬಳಿ ರಸ್ತೆ ಅಗಲೀಕರಣ, ಬಿಬಿಎಂಪಿಯಿಂದ ಮನೆಗಳ ತೆರವು ಕಾರ್ಯ
