ಆನೇಕಲ್ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ರು. ಬಿ. ಹೊಸಹಳ್ಳಿ ಹಾಗೂ ಹಂದೇನಹಳ್ಳಿ ಸುತ್ತಮುತ್ತ ಕೆಐಎಡಿಬಿ 2 ಸಾವಿರ ಎಕರೆ ಭೂಸ್ವಾಧೀನಪಡಿಸಿಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ.
ರೈತರ ಫಲವತ್ತಾದ ಭೂಮಿಯನ್ನು ಕೈಗಾರಿಕೆಗಳಿಗೆ ನಿಡಲು ಹೊರಟಿರುವ ಸರ್ಕಾರದ ನಡೆಯನ್ನ ಅವರು ಖಂಡಿಸಿದರು. ಕೂಡಲೇ ರಾಜ್ಯಸರ್ಕಾರ ಮತ್ತೊಮ್ಮೆ ಪರಿಶೀಲಿಸಿ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಚಂದ್ರಶೇಖರ್ ಆಗ್ರಹಿಸಿದರು

