ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿ ಸಮೀಪವಿರುವ ಎಂಪಿಎಸ್ ಬಡಾವಣೆಯಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ನಿವಾಸಿಗಳ ಸಮ್ಮುಖದಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಎಂಟಿಎಸ್ ಬಡಾವಣಿಯಲ್ಲಿ ಹಲವು ವರ್ಷಗಳಿಂದ ರಸ್ತೆ ಹಾಗೂ ಚರಂಡಿ ಸಮಸ್ಯೆಯಿಂದ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ನೂತನವಾಗಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಇಂದು ಶಾಸಕರು ಚಾಲನೆ ನೀಡಿದರು
ಕೆಂಗೇರಿ ಸಮೀಪದ ಎಂಟಿಎಸ್ ಬಡಾವಣೆಯಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸೋಮಶೇಖರ್ ಭೂಮಿಪೂಜೆ

