ಬೆಂಗಳೂರಿನ ಕೋರಮಂಗಲ – ಈಜಿಪುರ ಪ್ರೈಓವರ್ ಕಾಮಗಾರಿಯನ್ನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂದು ಪರಿಶೀಲನೆ ನಡೆಸಿದರು. ಹಲವು ತಿಂಗಳಿನಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಾರಿಗೆ ಸಚಿವರು ಆಗಮಿಸಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು. ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು

