ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅರಳಕುಂಟೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರ್ಕಾರಿ ಶಾಲೆಯ ಕಟ್ಟಡವನ್ನು ಇಂದು ಉದ್ಘಾಟನೆ ಮಾಡಲಾಯಿತು. ಶಾಸಕ ಸತೀಶ್ ರೆಡ್ಡಿ ಹಾಗೂ ಸ್ಥಳೀಯ ಮುಖಂಡರು ನೂತನ ಶಾಲಾ ಕಟ್ಟಡವನ್ನು ಲೋಕಾರ್ಪಣೆ ಮಾಡಿದರು. ಶಾಲೆಯ ಹಳೆಯ ಕಟ್ಟಡ ಶಿಥಿಲವಾಗಿದ್ದ ಹಿನ್ನೆಲೆಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನೂತನ ಕಟ್ಟಡವನ್ನು ನಿರ್ಮಿಸಿ ಇಂದು ಶಾಸಕರ ಸಮ್ಮುಖದಲ್ಲಿ ಉದ್ಘಾಟನೆ ಮಾಡಲಾಯಿತು. ಸ್ಥಳಿಯ ಮುಖಂಡರು ಹಾಗೂ ಗ್ರಾಮಸ್ಥರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

