Breaking
10 Feb 2026, Tue

ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟ‌ರ್ ಪೆರೇಡ್ ಆಯೋಜನೆ, ಸಮಾಜಘಾತಕ ಕೃತ್ಯ ನಡೆಸಿದಂತೆ ಎಚ್ಚರಿಕೆ

ಆನೇಕಲ್ ತಾಲ್ಲೂಕಿನ ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಯೋಜನೆ ಮಾಡಲಾಗಿತ್ತು. ಸೂರ್ಯ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ 20ಕ್ಕೂ ಹೆಚ್ಚು ರೌಡಿಶೀಟರ್‌ಗಳು ಪೆರೇಡ್‌ ನಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಸಮಾಜಘಾತಕ ಕೃತ್ಯಗಳನ್ನು ಎಸಗದಂತೆ ಪುಡಿ ರೌಡಿಗಳಿಗೆ ಎಚ್ಚರಿಕೆ ನೀಡಲಾಯಿತು. ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡಿದರೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡುವುದಾಗಿ ಪೊಲೀಸರು ಪುಡಿ ರೌಡಿಗಳಿಗೆ ಎಚ್ಚರಿಕೆ ನೀಡಿದರು

Leave a Reply