ಆನೇಕಲ್ ತಾಲೂಕಿನ ಹಾಲ್ಲೇನಹಳ್ಳಿ ಗ್ರಾಮದಲ್ಲಿ ಶ್ರೀ ಮುನೇಶ್ವರ ದೇವಾಲಯದ ವಾರ್ಷಿಕೋತ್ಸವ ಅಂಗವಾಗಿ ಹಳ್ಳಿಕಾರ್ ತಳಿಯ ಎತ್ತುಗಳ ಮೆರವಣಿಗೆ ನಡೆಸಲಾಯಿತು. ಸಿಂಗರಿಸಿದ ಎತ್ತುಗಳನ್ನು ಊರಿನ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಹಳ್ಳಿಕಾರ್ ಎತ್ತುಗಳ ಸಂರಕ್ಷಣೆ ಮಾಡುವಂತೆ ಜನರಲ್ಲಿ ತಿಳುವಳಿಕೆ ಮೂಡಿಸಲಾಯಿತು ಜೊತೆಗೆ ಮುನೇಶ್ವರ ದೇವರ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸಿ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.
ದೇವಾಲಯದ ಆಡಳಿತ ಮಂಡಳಿ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು

