Breaking
2 Apr 2026, Thu

ಗೊರಗುಂಟೆಪಾಳ್ಯದ ರಾಜ್ ಕುಮಾ‌ರ್ ಸರ್ಕಲ್ ಬಳಿ ನೂತನ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಮುನಿರತ್ನ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಗೊರಗುಂಟೆಪಾಳ್ಯ ಸಮೀಪವಿರುವ ರಾಜ್ ಕುಮಾರ್ ಸರ್ಕಲ್ ನಲ್ಲಿ ನೂತನ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ, ಶಾಸಕ ಮುನಿರತ್ನ ಹಾಗೂ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ರಾಜ್ ಕುಮಾರ್ ಸರ್ಕಲ್ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಚರಂಡಿ ಸಮಸ್ಯೆಯಿಂದ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ನೂತನ ಒಳಚರಂಡಿ ಕಾಮಗಾರಿಗೆ ಶಾಸಕರು ಇಂದು ಚಾಲನೆ ನೀಡಿದರು.

Leave a Reply