ಬೆಂಗಳೂರಿನ ಮಂಜುನಾಥ ನಗರದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇಂದು ಸಂಜೆ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಇಡೀ ಕಾರನ್ನ ವ್ಯಾಪಿಸಿದೆ. ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಮಂಜುನಾಥ ನಗರದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ, ಕ್ಷಣಮಾತ್ರದಲ್ಲಿ ಸುಟ್ಟು ಕರಕಲಾದ ಕಾರು

