ಬೆಂಗಳೂರಿನ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ನೂತನ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಗೌಡ ರವರಿಗೆ ಕೆಪಿಸಿಸಿ ಅದ್ಯಕ್ಷ ಡಿ ಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದರು. ಅತಿ ಹೆಚ್ಚು ಮತಗಳನ್ನು ಪಡೆದು ನೂತನ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ಗೌಡರವರನ್ನ ಎಐಸಿಸಿ ನೇಮಕ ಮಾಡಿ ಆದೇಶ ಪತ್ರ ನೀಡಿದೆ ಹೀಗಾಗಿ ಇಂದು ಕೆಪಿಸಿಸಿ ವತಿಯಿಂದ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಲಾಯಿತು. ಯೂಥ್ ಕಾಂಗ್ರೆಸ್ ಸದಸ್ಯರು ಹಾಗೂ ಪಕ್ಷದ ಹಿರಿಯ ಮುಖಂಡರು ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಂದೆ ಪಕ್ಷವನ್ನ ಮತ್ತಷ್ಟು ಸಂಘಟಿಸುವಂತೆ ಮಂಜುನಾಥ್ ಗೌಡ ರವರಿಗೆ ಡಿಕೆಶಿ ಕಿವಿಮಾತು ಹೇಳಿದರು.
ಬೆಂಗಳೂರಿನಲ್ಲಿ ನೂತನ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ರವರಿಗೆ ಡಿಕೆ ಶಿವಕುಮಾರ್ ರವರಿಂದ ಅಭಿನಂದನಾ

