ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಎಂಇಎಸ್ ಪುಂಡರನ್ನ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ಆನೇಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಎಂಇಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಗಡಿಯಲ್ಲಿ ಮತ್ತೆ ಎಂಇಎಸ್ ಪುಂಡರ ಹಾವಳಿ ಮೀತಿ ಮಿರಿದೆ. ಹೀಗಾಗಿ ಎಂಇಎಸ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಅಲ್ಲದೇ ಪುಂಡರನ್ನ ಬಂಧಿಸುವಂತೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ನಿಡಲಾಯಿತು