Breaking
16 Jul 2026, Thu

ಜಿಗಣಿ ಪೊಲೀಸ್ ಠಾಣೆ ಮುಂಭಾಗ ಕೆ ಆರ್ ಎಸ್ ಪಕ್ಷದ ವತಿಯಿಂದ ಪ್ರತಿಭಟನೆ

ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್ ಠಾಣೆ ಮುಂಭಾಗ ಕೆಆರ್‌ಎಸ್‌ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿ ನರಸಿಂಹ ರೆಡ್ಡಿ ಎಂಬುವವರು ಹೆಲ್ಮಟ್ ಇಲ್ಲದ ವಾಹನಗಳನ್ನ ಅಡ್ಡಗಟ್ಟಿ ದಂಡ ವಸೂಲಿ ಮಾಡುವ ನೆಪದಲ್ಲಿ ಸಾರ್ವಜನಿಕರಿಂದ ಲಂಚ ಸ್ವೀಕರಿಸಿದ್ದಾರೆ. ಅವರ ವೈಯಕ್ತಿಕ ಖಾತೆಗೆ ಯುಪಿಐ ಮೂಲಕ ಹಣವನ್ನ ಹಾಕಿಸಿಕೊಂಡಿರುವುದು ಈಗ ಬಯಲಾಗಿದೆ. ಹೀಗಾಗಿ ನರಸಿಂಹ ರೆಡ್ಡಿ ವಿರುದ್ಧ ಕ್ರಮ ಜರುಗಿಸಬೇಕೆಂದು ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಲಾಯಿತು

Leave a Reply