ವಿಜಯನಗರ ವಿಧಾನಸಭಾ ಕ್ಷೇತ್ರದ ಕೆಪಿ ಅಗ್ರಹಾರ ವಾರ್ಡ್ ನಲ್ಲಿ ನೂತನ ಚರಂಡಿ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಶಾಸಕ ಕೃಷ್ಣಪ್ಪ ಹಾಗೂ ಸ್ಥಳೀಯ ಮುಖಂಡರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಕೆ ಪಿ ಅಗ್ರಹಾರ ವಾರ್ಡ್ ನ ಕೆಲವು ರಸ್ತೆಗಳಲ್ಲಿ ಚರಂಡಿ ಸಮಸ್ಯೆಯಿಂದ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತ್ತಿತ್ತು. ಹೀಗಾಗಿ 40 ಲಕ್ಷ ವೆಚ್ಚದಲ್ಲಿ ನೂತನವಾಗಿ ಚರಂಡಿ ನಿರ್ಮಾಣ ಮಾಡುವ ಕಾಮಗಾರಿಗೆ ಶಾಸಕ ಕೃಷ್ಣಪ್ಪ ಚಾಲನೆ ನೀಡಿದ್ದಾರೆ.
ಕೆಪಿ ಅಗ್ರಹಾರ ವಾರ್ಡ್ ನಲ್ಲಿ ನೂತನ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ, ಶಾಸಕ ಕೃಷ್ಣಪ್ಪ ಹಾಗೂ ಸ್ಥಳೀಯರಿಂದ ಭೂಮಿ ಪೂಜೆ
