ಮಹಾದೇವಪುರ ವಿಧಾನಸಭಾ ಕ್ಷೇತ್ರದ ಕುಂದಲಹಳ್ಳಿಯಲ್ಲಿ ನೂತನ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಸ್ಥಳೀಯ ಮುಖಂಡರು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು ಕುಂದಲಹಳ್ಳಿಯ ಆಂಜನೇಯ ದೇವಾಲಯದ ಸುತ್ತಮುತ್ತ ರಸ್ತೆಗಳು ಗುಂಡಿಮಯವಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಗೆ ಶಾಸಕರು ಇಂದು ಚಾಲನೆ ನೀಡಿದ್ದಾರೆ.